ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಳಗಾವಿ: ತರಕಾರಿ ತರಲೆಂದು ಹೊರಟ ವೃದ್ಧನಿಗೆ ಅಪಘಾತ

ಬೆಳಗಾವಿ: ತರಕಾರಿ ತರಲೆಂದು ಹೊರಟ ವೃದ್ಧನಿಗೆ ಅಪಘಾತ


ನಾಗರಮುನ್ನೋಳಿ: ದಿನಸಿ ತರಲೆಂದು ಮನೆಯಿಂದ ಹೊರಟಿದ್ದ ವೃದ್ಧರೊಬ್ಬರಿಗೆ ರಸ್ತೆ ಅಪಘಾತ ನಡೆದಿದೆ. ಗ್ರಾಮದ ಹೊರವಲಯದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಕಾರು ಡಿಕ್ಕಿ ಹೊಡೆದು ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಬೆಳಗಾವಿಯ ನಾಗರಮುನ್ನೋಳಿಯಲ್ಲಿ ನಡೆಯಿತು.


ಮಲ್ಲಪ್ಪ ಭೀಮಪ್ಪ ಮದ್ಯಾಳಿ (60) ವರ್ಷ ಪ್ರಾಯದ ವೃದ್ಧ. ತೋಟದ ಮನೆಯಿಂದ ನಾಗರಮುನ್ನೋಳಿ ಗ್ರಾಮಕ್ಕೆ ದಿನಸಿ ಖರೀದಿಗೆ ಹೊರಟಿದ್ದ ವೃದ್ಧನಿಗೆ ಎದುರುಗಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವೃದ್ಧ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿದ್ದಾರೆ.


ಈ ಅಪಘಾತದಿಂದ ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಪಿಎಸ್‌ಐ ರಾಕೇಶ ಬಗಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم