ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಲಸಿಕಾ ಮಹಾ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡಿದ ಸಿಎಂ ಬಿ.ಎಸ್.ವೈ

ಲಸಿಕಾ ಮಹಾ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡಿದ ಸಿಎಂ ಬಿ.ಎಸ್.ವೈ


ಬೆಂಗಳೂರು:
ದೇಶದ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ಲಸಿಕಾ ಮೇಳಕ್ಕೆ ಇಂದು ಚಾಲನೆ ನೀಡಲಾಗಿದೆ. 

ಈ ಲಸಿಕಾ ಮಹಾ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕರ್ನಾಟಕದಲ್ಲಿ ಇಂದು ಒಂದೇ ದಿನ 7 ಲಕ್ಷ ಜನರಿಗೆ ಕೊರೋನಾ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದಿದ್ದಾರೆ.

18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ಕೇಂದ್ರದ ಮೂಲಕ ಕೋವಿಡ್ ಲಸಿಕೆ ನೀಡುತ್ತಿರುವುದು ಸಂತೋಷದ ವಿಷಯ. ರಾಜ್ಯದಲ್ಲಿ ಇಂದು 7 ಲಕ್ಷ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಲಸಿಕೆ ಸರಬರಾಜು ಮಾಡಲಾಗಿದೆ. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಆದಷ್ಟು ಬೇಗ ಕೊವೀಡ್ ಕೊನೆಯಾಗಿ ಜನರು ನೆಮ್ಮದಿಯಿಂದ ಬದುಕಲಿ ಎಂದು ದೇವರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

https://twitter.com/CMofKarnataka/status/1406818667069800461?s=20

ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ದಿನವಾಗಿರುವ ಇಂದು ಲಸಿಕಾ ಮೇಳದ ಮೂಲಕ ದೇಶದೆಲ್ಲರಿಗೂ ಉಚಿತ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕರ್ನಾಟಕದಲ್ಲಿ ಇಂದು ಒಂದೇ ದಿನ 7 ಲಕ್ಷ ಕೊರೋನಾ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

https://twitter.com/CMofKarnataka/status/1406820242207117315?s=20

 18 ವರ್ಷ ಮೇಲ್ಪಟ್ಟವರು ಮೊದಲ ಡೋಸ್, 45 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಲಸಿಕೆ ಪಡೆಯಬೇಕು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಕೊರೋನಾ ಲಸಿಕೆ ನೀಡಿ, ಕೋವಿಡ್​ನಿಂದ ಮುಕ್ತರನ್ನಾಗಿಸುವ ಗುರಿ ನಮ್ಮ ಸರ್ಕಾರದ್ದು ಎಂದು ಹೇಳಿದ್ದಾರೆ.



0 تعليقات

إرسال تعليق

Post a Comment (0)

أحدث أقدم