ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಹಿಕ ಭಾಷಾ ವೇದಿಕೆ ಹಾಗೂ ಕುಂದಾಪ್ರ ಕನ್ನಡ ಸಂಘ, ಉಜಿರೆ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ರಾಜ್ಯಮಟ್ಟದ ಕುಂದಾಪ್ರ ಕನ್ನಡ ಶಬ್ದಾರ್ಥ ಗುರುತಿಸುವ ಆನ್ಲೈನ್ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಒಟ್ಟು ಏಳು ಸಾವಿರ ಮಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ.ದಿನೇಶ್ ಚೌಟ ಹಾಗೂ ಸಂಯೋಜಕರಾದ ಡಾ. ಪ್ರಸನ್ನಕುಮಾರ ಐತಾಳ್ ಭಾಗವಹಿಸಿ ಪ್ರಮಾಣ ಪತ್ರ ಪಡೆದ ಎಲ್ಲರನ್ನೂ ಅಭಿನಂದಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment