ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕರ್ನಾಟಕ ಕಾರ್ಮಿಕ ಸಂಘದ ದ ಕ ಜಿಲ್ಲಾಧ್ಯಕ್ಷರಾಗಿ ಎಚ್. ಭೀಮರಾವ್ ವಾಷ್ಠರ್ ಅಧಿಕಾರ ಸ್ವೀಕಾರ

ಕರ್ನಾಟಕ ಕಾರ್ಮಿಕ ಸಂಘದ ದ ಕ ಜಿಲ್ಲಾಧ್ಯಕ್ಷರಾಗಿ ಎಚ್. ಭೀಮರಾವ್ ವಾಷ್ಠರ್ ಅಧಿಕಾರ ಸ್ವೀಕಾರ


ಕುಣಿಗಲ್: ಕರ್ನಾಟಕ ಕಾರ್ಮಿಕ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸುಳ್ಯದ ಸಾಹಿತಿ, ಜ್ಯೋತಿಷಿ ಮತ್ತು ಸಂಘಟನಾಕಾರರಾದ ಎಚ್. ಭೀಮರಾವ್ ವಾಷ್ಠರ್ ಅವರು ಆಯ್ಕೆಯಾಗಿದ್ದಾರೆ.


ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿರುವ ಕನ್ನಡ ಭವನದಲ್ಲಿ ನಡೆದ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರ ಅಧಿಕಾರ ಹಸ್ತಾಂತರ ಮತ್ತು ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷ ಕೆ ಎಸ್ ವೆಂಕಟಸುಬ್ಬಯ್ಯ ಅವರು ಭೀಮರಾವ್ ವಾಷ್ಠರ್ ಅವರಿಗೆ ದ.ಕ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿ ಅಧಿಕಾರ ಹಸ್ತಾಂತರಿಸಿದರು.


ವಾಷ್ಠರ್ ಅವರ ಸೇವಾ ಮನೋಭಾವನೆ ಮತ್ತು ಸಂಘಟನಾತ್ಮಕ ವಿಚಾರವನ್ನು ಮನಗಂಡು ದ.ಕ ಜಿಲ್ಲಾಧ್ಯಕ್ಷ ಸ್ಥಾನಮಾನ ನೀಡಿ ಅಧಿಕಾರದ ನೇಮಕಾತಿ ಆದೇಶ ಪತ್ರವನ್ನು ನೀಡಿ ಸನ್ಮಾನಿಸಿ ಗೌರವಿಸಿದರು.


ಈ ಸಂದರ್ಭದಲ್ಲಿ ಕುಣಿಗಲ್ ಕ್ಷೇತ್ರದ ಶಾಸಕರಾದ ಡಾ. ರಂಗನಾಥ್, ಕಾರ್ಯದರ್ಶಿ ಪರಮಶಿವಯ್ಯ, ಕಾರ್ಯಾಧ್ಯಕ್ಷ ನರಸಿಂಹಯ್ಯ, ಉಪಾಧ್ಯಕ್ಷ ಡಿಎಲ್ ಕುಮಾರ್, ಸಂಚಾಲಕ ನರಸಿಂಹಮೂರ್ತಿ, ವಿಶ್ವನಾಥ್, ನರಸಿಂಹರಾಜು, ಗಂಗಣ್ಣ, ಈರಣ್ಣ, ನಾಗಣ್ಣ, ಡಿ ಎಲ್ ಕುಮಾರ್, ಜಯಣ್ಣ, ಶಿವರಾಜ್, ರಾಯಚೂರು ಜಿಲ್ಲಾಧ್ಯಕ್ಷ ವಿಜಯದಾಸ ನವಲಿ ಇನ್ನಿತರರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post