ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾಮಾಂತರ), ಕಂದಾವರ ಗ್ರಾಮ ಪಂಚಾಯತ್, ಕೆಐಒಸಿಎಲ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರ ಸಂಪೂರ್ಣ ಸಹಕಾರದೊಂದಿಗೆ ನ್ಯೂ ಕಂದಾವರ ಅಂಗನವಾಡಿಯ ನೂತನ ಕಟ್ಟಡವನ್ನು ಮಂಗಳೂರು ನಗರ ಉತ್ತರ ಶಾಸಕರಾಗಿರುವ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.
ಕೆಐಒಸಿಎಲ್ ಅಧ್ಯಕ್ಷರೂ, ವ್ಯವಸ್ಥಾಪಕ ನಿರ್ದೇಶಕರಾದ ಸ್ವಪನ್ ಕುಮಾರ್ ಗೋರೈ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್, ಶ್ರೀಮತಿ ಶೈಲಾ.ಕೆ.ಕಾರಿಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗ್ರಾಮಾಂತರ, ಸ್ಥಳದಾನಿಗಳಾದ ದಿ.ಪದ್ಮನಾಭ ಶೇಣವ, ದಿ. ಸುಶೀಲ ಪಿ ಶೇಣವ ಅವರ ಮಕ್ಕಳು, ಕೆಐಒಸಿಎಲ್ ಅಧಿಕಾರಿಗಳು, ಸಿಬ್ಬಂದಿಗಳು, ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق