ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಡಲ ತೀರದ ಸ್ವಚ್ಛತೆ ಕಾಪಾಡಿಕೊಳ್ಳೋಣ: ಡಾ. ಚೂಂತಾರು

ಕಡಲ ತೀರದ ಸ್ವಚ್ಛತೆ ಕಾಪಾಡಿಕೊಳ್ಳೋಣ: ಡಾ. ಚೂಂತಾರು

ಪಣಂಬೂರು ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ




ಮಂಗಳೂರು: ದಿನನಿತ್ಯ ಕಡಲತೀರಕ್ಕೆ ವಿಹಾರಕ್ಕೆ ಬರುವ ಪ್ರವಾಸಿಗರು ಮತ್ತು ಯಾತ್ರಿಗಳು ಕಡಲ ತೀರವನ್ನು ಕಲುಷಿತಗೊಳಿಸುತ್ತಿರುವುದು ಬಹಳ ಖೇದಕರ ವಿಚಾರವಾಗಿದೆ. ವಾರಾಂತ್ಯದ ಮೋಜುಮಸ್ತಿಗೆ ಬರುವ ಯುವಕ, ಯುವತಿಯರು ಕಡಲತೀರದಲ್ಲಿ ಪ್ಲಾಸ್ಟಿಕ್ ಬಾಟಲ್, ಕವರ್‍ಗಳು ಮತ್ತು ಬಿಯರ್ ಬಾಟಲ್‍ಗಳನ್ನು  ಎಸೆಯುವುದು ಅಕ್ಷಮ್ಯ ಅಪರಾಧ. ಕಡಲ ತೀರ ಎನ್ನುವುದು ತ್ಯಾಜ್ಯ ಗುಂಡಿಯಲ್ಲ. ಕಡಲ ತೀರವನ್ನು  ಕಲುಷಿತಗೊಳಿಸುವವರಿಗೆ ಕಠಿಣ ಶಿಕ್ಷೆ ನೀಡಬೇಕು. ಕಡಲ ತೀರವನ್ನು ಸ್ವಚ್ಛವಾಗಿಡುವುದು ಕೇವಲ ಜಿಲ್ಲಾಡಳಿತದ ಕೆಲಸವಲ್ಲ, ಪರಿಸರದ ಮತ್ತು ಕಡಲ ತೀರದ ಸ್ವಚ್ಛತೆಗೆ ಪ್ರತಿಯೊಬ್ಬರೂ ಹೊಣೆಗಾರರಾಗಬೇಕು. ಬೇಕಾಬಿಟ್ಟಿ ತಿಂದು, ಎಲ್ಲೆಂದರಲ್ಲಿ ಕಸ ಎಸೆಯುವುದು ವಿದ್ಯಾವಂತರ ಲಕ್ಷಣವೂ ಅಲ್ಲ, ಸಭ್ಯತೆಯೂ ಅಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪ್ರಜೆಗಳು ತಮ್ಮ ಹೊಣೆಗಾರಿಕೆ ಅರಿತು ನಿಭಾಯಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅಭಿಪ್ರಾಯಪಟ್ಟರು.


ಸೋಮವಾರದಂದು (ಅ.4) ಪಣಂಬೂರು ಬೀಚ್‍ನಲ್ಲಿ ಪಣಂಬೂರು ಘಟಕ ಗೃಹರಕ್ಷಕ ದಳ ಇದರ ವತಿಯಿಂದ  ಕಡಲ ತೀರದ ಸ್ವಚ್ಛತಾ ಅಭಿಯಾನ ಬೆಳಗ್ಗೆ 7 ರಿಂದ 9 ಗಂಟೆ ವರೆಗೆ ನಡೆಯಿತು. ಪಣಂಬೂರು ಗೃಹರಕ್ಷಕದಳ ಇದರ ಪ್ರಭಾರ ಘಟಕಾಧಿಕಾರಿ ಶಿವಪ್ಪ ನಾಯ್ಕ್ ಮತ್ತು ಪಣಂಬೂರು ಘಟಕದ ಗೃಹರಕ್ಷಕರಾದ ಗಂಗಾಧರ್ ಎಸ್.ಕೆ, ಗಂಗಾಧರ್, ಪ್ರತಾಪ್, ರಾಜೇಂದ್ರ ರಾವ್, ಬೇಬಿ, ಪ್ರೇಮ, ನಿಶಾಲ್, ದುಷ್ಯಂತ್, ದಿವಾಕರ್ ಸೇರಿದಂತೆ ಒಟ್ಟು 25 ಮಂದಿ ಈ ಅಭಿಯಾನದಲ್ಲಿ ಪಾಲ್ಗೊಂಡರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post