ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸರ್ಕಾರಿ ಬಸ್ ಮತ್ತು ಕಾರು ಅಪಘಾತ; ನಾಲ್ವರು ಸಾವು

ಸರ್ಕಾರಿ ಬಸ್ ಮತ್ತು ಕಾರು ಅಪಘಾತ; ನಾಲ್ವರು ಸಾವು

 


ವಿಜಯಪುರ: ಸರ್ಕಾರಿ ಬಸ್​ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಡೆದಿದೆ.

ಚಿದಾನಂದ ನಾಗೇಶ ಸೂರ್ಯವಂಶಿ (45), ಸೋಮನಾಥ ಕಾಳೆ (43), ಸಂದೀಪ ಪವಾರ (40), ವಿಜಯಕುಮಾರ್ ಕಾಶಿನಾಥ್ ದೊಡಮನಿ (32) ಅಪಘಾತ ದಲ್ಲಿ ಮೃತಪಟ್ಟ ದುರ್ದೈವಿಗಳು.

ವಿಜಯಪುರದಲ್ಲಿ ನಿಶ್ಚಿತಾರ್ಥ ಕಾರ್ಯಕ್ಕೆ ಆಗಮಿಸಿದ್ದ ಬಸ್​ ನರಗುಂದಕ್ಕೆ ವಾಪಸ್​ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಅತೀ ವೇಗ ಹಾಗೂ ಚಾಲಕನ ಆಜಾಗರೂಕತೆಯೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಪರಿಣಾಮ ಎನ್​ಎಚ್ 52ರಲ್ಲಿ ಸಂಚಾರಕ್ಕೆ ವ್ಯತ್ಯಯವಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 تعليقات

إرسال تعليق

Post a Comment (0)

أحدث أقدم