ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗುಂಡ್ಯ ; ನದಿ ಮಧ್ಯದ ಬಂಡೆಯ ಮೇಲೆ ಸೆಲ್ಫಿ ತೆಗೆಯಲು ಹೋಗಿ ಯುವಕ ನೀರುಪಾಲು

ಗುಂಡ್ಯ ; ನದಿ ಮಧ್ಯದ ಬಂಡೆಯ ಮೇಲೆ ಸೆಲ್ಫಿ ತೆಗೆಯಲು ಹೋಗಿ ಯುವಕ ನೀರುಪಾಲು

 


ಉಪ್ಪಿನಂಗಡಿ; ನದಿ ಮಧ್ಯದ ಬಂಡೆಯ ಮೇಲೆ ಸೆಲ್ಫಿ ತೆಗೆಯಲು ಹೋಗಿ ಯುವಕ ನೀರುಪಾಲಾದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗುಂಡ್ಯ ಬಳಿ ನಡೆದಿದೆ. ರಾಜಸ್ಥಾನ ಮೂಲದ ಸೀತಾರಾಮ್ ನೀರುಪಾಲಾದ ಯುವಕ. ಗುಂಡ್ಯ ಬಳಿ ಬಂದ ಗೂಡ್ಸ್ ಟೆಂಪೋ ದ ಡ್ರೈವರ್ ಹಾಗೂ ಕ್ಲೀನರ್ ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ವಾಹನ ನಿಲ್ಲಿಸಿ, ನದಿಯ ಬಂಡೆಯೊಂದರ ಮೇಲೆ ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ.


ಈ ವೇಳೆ ಸೀತಾರಾಮ್ ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.ನೀರು ಪಾಲಾದ ಯುವಕನಿಗಾಗಿ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಇಂದು ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸುವ ಸಾಧ್ಯತೆಯಿದೆ.


ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



0 Comments

Post a Comment

Post a Comment (0)

Previous Post Next Post