ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕೆಎಸ್ ಆರ್ ಟಿಸಿ ಬಸ್

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕೆಎಸ್ ಆರ್ ಟಿಸಿ ಬಸ್

 


ಚಿಕ್ಕಬಳ್ಳಾಪುರ: 25 ಜನ ಪ್ರಯಾಣಿಕರಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಘಟನೆಯೊಂದು ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದ ಬಳಿ ಸಂಭವಿಸಿದೆ.


ಬಾಗೇಪಲ್ಲಿಯಿಂದ ಚಿಂತಾಮಣಿ ಮಾರ್ಗವಾಗಿ ಈ ಸಾರಿಗೆ ಬಸ್ ಸಂಚರಿಸುತ್ತಿತ್ತು.

ಮುಂದೆ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ.

ಬಸ್​ನಲ್ಲಿ ಒಟ್ಟು 25 ಮಂದಿ ಪ್ರಯಾಣಿಸುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಕುರಿತು ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 Comments

Post a Comment

Post a Comment (0)

Previous Post Next Post