ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುನೀತ್ ಅಭಿಮಾನಿ ಆತ್ಮಹತ್ಯೆಗೆ ಶರಣು

ಪುನೀತ್ ಅಭಿಮಾನಿ ಆತ್ಮಹತ್ಯೆಗೆ ಶರಣು

 


ದಾವಣಗೆರೆ:  ಪುನೀತ್ ಸಾವಿನಿಂದ ಬೇಸತ್ತು ದಾವಣಗೆರೆಯಲ್ಲಿ ಓರ್ವ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ದಾವಣಗೆರೆಯ ವಿಜಯನಗರ ಬಡಾವಣೆಯಲ್ಲಿ ನಡೆದಿದೆ.


ಸಿ. ಕುಮಾರ್ (25)ವರ್ಷ ಆತ್ಮಹತ್ಯೆ ಮಾಡಿಕೊಂಡ ಪುನೀತ್​ ಅಭಿಮಾನಿ.

ಈತ ವಿಜಯನಗರ ಬಡಾವಣೆಯ ಸಾಯಿ ಮಂದಿರ ಸಮೀಪದ ನಿವಾಸಿ. ಈತ ಪುನೀತ್ ರಾಜಕುಮಾರ್​ ಅವರ ಅಪ್ಪಟ ಅಭಿಮಾನಿ.


​ ನವೆಂಬರ್​ 2ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ


0 Comments

Post a Comment

Post a Comment (0)

Previous Post Next Post