ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುನೀತ್ ನಿಧನದಿಂದ ಮನ ನೊಂದು ಅಭಿಮಾನಿ ಸಾವು

ಪುನೀತ್ ನಿಧನದಿಂದ ಮನ ನೊಂದು ಅಭಿಮಾನಿ ಸಾವು

 


ಹಾಸನ: ನಟ ಪುನೀತ್ ರಾಜ್ ಕುಮಾರ್ ಅವರ ನಿಧನದಿಂದ ನೊಂದ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ನಗರದ ಮಯೂರ ಎಂಬವರು ಅಪ್ಪು ನಿಧನದಿಂದ ಮನನೊಂದು ಸಾವಿಗೆ ಶರಣಾಗಿದ್ದಾರೆ.

ಪುನೀತ್ ನಿಧನದ ಬಳಿಕ ಖಿನ್ನತೆಗೊಳಗಾಗಿ ಮಂಕಾಗಿದ್ದ ಮಯೂರ ಇದೀಗ ನೇಣಿಗೆ ಶರಣಾಗಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವರು ಹಾಸನದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ಹಾ.ರಾ.ನಾಗರಾಜ್ ಪುತ್ರನಾಗಿದ್ದಾರೆ.


ನಟ ಪುನೀತ್ ಅವರ ದೊಡ್ಡ ಅಭಿಮಾನಿಯಾಗಿದ್ದ ಮಯೂರ, ಅಪ್ಪು ಅವರನ್ನು ಹಲವು ಬಾರಿ ಭೇಟಿಯಾಗಿದ್ದರು.  ಅವರ ಸಾವಿನ ಬಳಿಕ ಆಘಾತಗೊಂಡು, ಮಾನಸಿಕವಾಗಿ ನೊಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ಅಪ್ಪುವಿನ ಹತ್ತಾರು ಸ್ಟೇಟಸ್ ಹಾಕಿಕೊಂಡು ದುಃಖ ಹೊರಹಾಕುತ್ತಿದ್ದರು.


ನಿನ್ನೆಯ ದಿನ (ನವೆಂಬರ್ 24) ಸಂಜೆ ಹಾಸನ ನಗರದ ರಾಜಕುಮಾರ ನಗರದ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ.  ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 Comments

Post a Comment

Post a Comment (0)

Previous Post Next Post