ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವೀರರಾಣಿ ಅಬ್ಬಕ್ಕ ಪ್ರಶಸ್ತಿಗೆ ಚಂದ್ರಕಲಾ ನಂದಾವರ ಆಯ್ಕೆ

ವೀರರಾಣಿ ಅಬ್ಬಕ್ಕ ಪ್ರಶಸ್ತಿಗೆ ಚಂದ್ರಕಲಾ ನಂದಾವರ ಆಯ್ಕೆ




ಮಂಗಳೂರು: ಮಂಗಳೂರು ನಗರದ ಹೊರವಲಯದ ಉಳ್ಳಾಲ ವೀರರಾಣೆ ಅಬ್ಬಕ್ಕ ಉತ್ಸವ ಸಮಿತಿಯ ಆಶ್ರಯದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಉಳ್ಳಾಲ ನಗರಸಭೆಯ ಸಹಯೋಗದಲ್ಲಿ ' ವೀರರಾಣಿ ಅಬ್ಬಕ್ಕ ಉತ್ಸವ - 2021 ರಜತ ಸಂಭ್ರಮ' ಕಾರ್ಯಕ್ರಮದ ವೀರರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕಾರಕ್ಕೆ  ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿ ನಿವೃತ್ತರಾದ ಚಂದ್ರಕಲಾ ನಂದಾವರ ಅವರು ಆಯ್ಕೆಯಾಗಿದ್ದಾರೆ.

ಡಿಸೆಂಬರ್ 21 ರಂದು ಉಳ್ಳಾಲ ನಗರಸಭೆ ಆವರಣದಲ್ಲಿರುವ ಮಹಾತ್ಮಗಾಂಧಿ ರಂಗಮಂದಿರದಲ್ಲಿ ಅಬ್ಬಕ್ಕ ಉತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ವಿಶೇಷ ಸಾಧನೆಗೈದ, ಸಾಹಿತ್ಯದಲ್ಲಿ ಸೇವೆ ಮಾಡಿದ ಸಾಧಕರಿಂದ " ಅಬ್ಬಕ್ಕ ಪ್ರಶಸ್ತಿ ಪುರಸ್ಕಾರ " ಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.  

ಶಿಕ್ಷಣದಲ್ಲಿ  ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ , ಮಂಗಳೂರಿನ ಗಣಪತಿ ಪಿಯು ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಚಂದ್ರಕಲಾ ನಂದಾವರ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

0 Comments

Post a Comment

Post a Comment (0)

Previous Post Next Post