ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ: ಡಾ. ಚೂಂತಾರು

ಪ್ರಾಮಾಣಿಕ ಗೃಹರಕ್ಷಕರೇ ದೇಶದ ನಿಜವಾದ ಆಸ್ತಿ: ಡಾ. ಚೂಂತಾರು



ಪುತ್ತೂರು: ಕಡಬ ಗೃಹರಕ್ಷಕ ದಳದ ಸದಸ್ಯರಾಗಿ ಕಳೆದ 24 ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತ ಬಂದಿರುವ ಉದಯಶಂಕರ್ ಅವರನ್ನು ಇಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಸಮ್ಮಾನಿಸಿ ಗೌರವಿಸಿದರು.


ಉದಯ್‍ಶಂಕರ್, ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಡಬ ಘಟಕದ ಗೃಹರಕ್ಷಕರಾಗಿದ್ದು, 1997 ರಲ್ಲಿ ಗೃಹರಕ್ಷಕದಳದ ಸದಸ್ಯನಾಗಿ ಸೇರ್ಪಡೆಯಾಗಿ, 24 ವರ್ಷಗಳಿಂದ ಸ್ವಾರ್ಥ ರಹಿತ ನಿಷ್ಕಾಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುತ್ತಾರೆ. ಇವರ ಸೇವಾ ಅವಧಿಯಲ್ಲಿ ಅನೇಕ ಬಂದೋಬಸ್ತು ಕರ್ತವ್ಯ, ಕವಾಯತು, ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಅವರು ೋರ್ವ ದಕ್ಷ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದು, ಕಡಬ ಗೃಹರಕ್ಷಕದಳದ ಸಕ್ರಿಯ ಸದಸ್ಯರಾಗಿರುತ್ತಾರೆ. ಅವರ ಸೇವೆಯನ್ನು ಗುರುತಿಸಿ ಗೌರವಿಸಿ ಅವರನ್ನು ಸನ್ಮಾನಿಸಲಾಗಿದೆ ಎಂದು ಡಾ. ಚೂಂತಾರು ನುಡಿದರು.


ಅವರು ಇಂದು (ಡಿ.26) ಕಡಬದ ಗೃಹರಕ್ಷಕದಳದ ಕಛೇರಿಗೆ ಭೇಟಿ ನೀಡಿ, ವಾರದ ಕವಾಯತನ್ನು ವೀಕ್ಷಿಸಿದರು ಮತ್ತು ಇದೇ ಸಂದರ್ಭದಲ್ಲಿ ಉದಯಶಂಕರ್ ಅವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿದರು.


ಕಡಬ ಘಟಕದ ಪ್ರಭಾರ ಘಟಕಾಧಿಕಾರಿ ತೀರ್ಥೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಬ ಘಟಕದ ಸುಮಾರು 40 ಮಂದಿ ಗೃಹರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post