ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕುಂಜತ್ತಬೈಲ್ ಉತ್ತರ ವಾರ್ಡ್ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್‌ ಶೆಟ್ಟಿ ಚಾಲನೆ

ಕುಂಜತ್ತಬೈಲ್ ಉತ್ತರ ವಾರ್ಡ್ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್‌ ಶೆಟ್ಟಿ ಚಾಲನೆ



ಮಂಗಳೂರು: 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ಉತ್ತರ ವಾರ್ಡ್ ನಂಬ್ರ 13ರ ಜ್ಯೋತಿನಗರ ಪ್ರದೇಶದಲ್ಲಿ ಮೂಲಭೂತ ಸೌಕರ್ಯದ ಕಾಮಗಾರಿಗಳಿಗೆ ಶಾಸಕರಾದ ಡಾ.ಭರತ್ ಶೆಟ್ಟಿ ವೈಯವರು ಶನಿವಾರ ಗುದ್ದಲಿಪೂಜೆ ನೆರವೇರಿಸಿದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಕಾರ್ಪೊರೇಟರ್ ಶರತ್ ಕುಮಾರ್ ಕುಂಜತ್ತಬೈಲ್, ಪಕ್ಷದ ಪ್ರಮುಖರಾದ ಗುರುರಾಜ್ ಪಾಟೀಲ್, ಶರಣ್  ಶೆಟ್ಟಿ ಜ್ಯೋತಿನಗರ, ಗಣೇಶ ಕುಲಾಲ್, ಪ್ರಕಾಶ್, ಸ್ಥಳೀಯ ಭಾಗದ ಪ್ರಮುಖರಾದ ಮಲ್ಲಣ್ಣ, ನಾಗಪ್ಪ, ಬಸವರಾಜ್ ದೊಡ್ಡಮನಿ, ರಮೇಶ್ ಜ್ಯೋತಿನಗರ,ಆತ್ಮಾನಂದ, ಅರ್ಚಕರಾದ ಹೇಮಯ್ಯ ಹಿರೇಮಠ, ಗುರುರಾಜ್ ಗುರುಸ್ವಾಮಿ, ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


*****

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಕೃಷ್ಣಾಪುರ ಮಠದ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ

20 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಪೂರ್ವ ವಾರ್ಡ್ 2 ರ ಕೃಷ್ಣಾಪುರ ಮಠದ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸುವ ಯೋಜನೆಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ, ಪ್ರಮುಖರಾದ ಹರಿ ಭಟ್, ಶ್ರೀಕಾಂತ್ ಭಟ್, ವಿಶ್ವನಾಥ ಭಟ್, ಮೋನಪ್ಪ ಶೆಟ್ಟಿ, ಗಗನ್, ಶಕ್ತಿ ಕೇಂದ್ರ ಪ್ರಮುಖ್ ಸುರೇಂದ್ರ ಸುವರ್ಣ, ಜಯಂತ್, ಸಹಪ್ರಮುಖ್ ರಾಕೇಶ್ ಬಂಗೇರ, ಸುಧಾಕರ ಪೂಂಜ, ರುಕ್ಮಯ್ಯ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ಭರತರಾಜ್ ಕೃಷ್ಣಾಪುರ, ಸಂದೇಶ್ ಶೆಟ್ಟಿ ಸಹಿತ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post