ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಲ್ಲೆ ಪ್ರಕರಣದಲ್ಲಿ ಬಂಧಿತ ನಿರಪರಾಧಿಗಳ ಬಿಡುಗಡೆಗೆ ಶಾಸಕ ಡಾ. ವೈ ಭರತ್ ಶೆಟ್ಟಿ ನೆರವು

ಹಲ್ಲೆ ಪ್ರಕರಣದಲ್ಲಿ ಬಂಧಿತ ನಿರಪರಾಧಿಗಳ ಬಿಡುಗಡೆಗೆ ಶಾಸಕ ಡಾ. ವೈ ಭರತ್ ಶೆಟ್ಟಿ ನೆರವು


ಮಂಗಳೂರು: ಇತ್ತೀಚೆಗೆ ವಾಮಂಜೂರು ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿ ಹಲ್ಲೆ ಪ್ರಕರಣವೊಂದರಲ್ಲಿ ಕೇಸು ಪೊಲೀಸ್ ಠಾಣೆಯಲ್ಲಿ ದಾಖಲಾಗಿ ಅಪರಾಧಿಗಳನ್ನು ಬಂಧಿಸಿರುವ ಪೊಲೀಸರು ಹಲವು ನಿರಪರಾಧಿಗಳನ್ನು ಕೂಡ ವಶಕ್ಕೆ ಪಡೆದುಕೊಂಡಿದ್ದರು.


ಮಾಹಿತಿಯನ್ನು ಪಡೆದ ಶಾಸಕ  ಡಾ.ಭರತ್ ಶೆಟ್ಟಿ ವೈಯವರು ಪೊಲೀಸ್ ಠಾಣೆಗೆ ತೆರಳಿ ಖುದ್ದಾಗಿ ಅಧಿಕಾರಿಗಳೊಂದಿಗೆ ಮಾತುಕತೆ ಮಾಡಿ ಅಪರಾಧಿಗಳ ವಿಚಾರಣೆಗೆ ಯಾರೂ ಅಡ್ಡಿಪಡಿಸುವುದಿಲ್ಲ; ಆದರೆ ವಿನಾಕಾರಣ ನಿರಪರಾಧಿಗಳಿಗೆ ಶಿಕ್ಷೆಯಾಗುವುದು ಸರಿಯಲ್ಲ ಎಂದರಲ್ಲದೆ ಈ ಪ್ರಕರಣದಲ್ಲಿ ಭಾಗಿಯಾಗದ ಯುವಕರ ಮೇಲೆ ಪ್ರಕರಣ ದಾಖಲಾಗದಂತೆ ನೋಡಿಕೊಂಡು ಶಾಸಕರು ಬಿಡಿಸಿ ಕರೆತಂದಿದ್ದಾರೆ.


ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಹಿಂದೂ ಜಾಗರಣ ವೇದಿಕೆಯ ಹರೀಶ್ ಮಟ್ಟಿ ಜೊತೆಗಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم