ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಂತ ಶಿಶುನಾಳ ಶರೀಫ ಪ್ರಶಸ್ತಿಗೆ ಹರೀಶ್ ಪುತ್ತೂರು ಆಯ್ಕೆ

ಸಂತ ಶಿಶುನಾಳ ಶರೀಫ ಪ್ರಶಸ್ತಿಗೆ ಹರೀಶ್ ಪುತ್ತೂರು ಆಯ್ಕೆ


ಪುತ್ತೂರು: ರಾಜ್ಯ ಘಟಕ ಚಿತ್ರದುರ್ಗ ಮತ್ತು ಕನ್ನಡ ಸಾಹಿತ್ಯ ಸಾಗರ ಸಂಸ್ಥೆ ಇದರ ಜಂಟಿ ಸಹಭಾಗಿತ್ವದಲ್ಲಿ ನೀಡುವ "ಸಂತ ಶಿಶುನಾಳ ಶರೀಫ ರಾಜ್ಯ ಪ್ರಶಸ್ತಿ" ಗೆ ದಕ್ಷಿಣ ಕನ್ನಡದ ಯುವ ಬರಹಗಾರ ಮತ್ತು ಜರ್ನಲಿಸ್ಟ್ ಆಗಿರುವ ಹರೀಶ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸಂಸ್ಥೆಯು ಪ್ರತೀ ವರ್ಷವು ಕನ್ನಡದ ಪರ ಏನಾದರೂ ಒಂದು ಸೇವೆಯನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದು ಈ ಬಾರಿ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಹರೀಶ್ ಇವರು ಕೊಡಿಯಾಲ ಗ್ರಾಮದ ಬಾಬು ಎಚ್.ಆರ್ ಮತ್ತು ಕಮಲ ದಂಪತಿಯ ಪುತ್ರನಾಗಿದ್ದು ಖಾಸಗಿ ಸುದ್ದಿ ವಾಹಿನಿಯೊಂದರ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

0 Comments

Post a Comment

Post a Comment (0)

Previous Post Next Post