ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಬ್ಬಿನ ಹೊಲದಲ್ಲಿ ಲಾರಿಗೆ ಬೆಂಕಿ

ಕಬ್ಬಿನ ಹೊಲದಲ್ಲಿ ಲಾರಿಗೆ ಬೆಂಕಿ

 


ಧಾರವಾಡ: ಕಬ್ಬಿನ ಹೊಲದಲ್ಲಿ ಲಾರಿಗೆ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿರುವ ಘಟನೆಯೊಂದು ಜಿಲ್ಲೆಯ ಕಲಘಟಗಿ ತಾಲೂಕಿನ ಸೋಮನಕೊಪ್ಪ ಗ್ರಾಮದಲ್ಲಿ ನಡೆದಿದೆ.

ದ್ಯಾಮಣ್ಣ ಗುಡಿಗಾಳ ಎನ್ನುವವರ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಲಾರಿ ಸ್ಟಾರ್ಟ್ ಮಾಡುವಾಗ ಬೆಂಕಿಯ ಕಿಡಿ ಕೆಳಗೆ ಬಿದ್ದಿದೆ. ಕಿಡಿ ಕಬ್ಬಿನ ಹೊಲಕ್ಕೆ ತಗುಲಿದ್ದು, ನಂತರ ಬೆಂಕಿ ಲಾರಿಗೂ ತಗುಲಿ ಹೊತ್ತಿ ಉರಿದಿದೆ. 

ಬೆಂಕಿ ಕ್ಷಣ ಮಾತ್ರದಲ್ಲಿ ಸಂಪೂರ್ಣ ಲಾರಿಗೆ ವ್ಯಾಪಿಸಿ ಸುಟ್ಟು ಕರಕಲಾಗಿದೆ. ಬೆಂಕಿ ಪಕ್ಕದ ಮೂರು ಎಕರೆಯಲ್ಲಿದ್ದ ಕಬ್ಬು ಬೆಳೆಗೆ ತಗುಲಿದ ಪರಿಣಾಮ ಕಬ್ಬು ಸುಟ್ಟು ಭಸ್ಮವಾಗಿದೆ.

 ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದರು. ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم