ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಗಲಿದ ಗೃಹರಕ್ಷಕ ರಾಜೇಶ್ ಅವರ ಕುಟುಂಬಕ್ಕೆ ಶಾಸಕರಿಂದ 5 ಲಕ್ಷ ಪರಿಹಾರಧನ

ಅಗಲಿದ ಗೃಹರಕ್ಷಕ ರಾಜೇಶ್ ಅವರ ಕುಟುಂಬಕ್ಕೆ ಶಾಸಕರಿಂದ 5 ಲಕ್ಷ ಪರಿಹಾರಧನ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಘಟಕದ ದಿ|| ರಾಜೇಶ್ ಮೆ.ನಂ 819 ಇವರು 29-05-2018 ರಲ್ಲಿ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತದಲ್ಲಿ ಮರಣ ಹೊಂದಿದ್ದು, ಇವರಿಗೆ ಸರಕಾರದಿಂದ 5 ಲಕ್ಷ ಪರಿಹಾರ ಧನವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಇವರು ಪರಿಹಾರಧನವನ್ನು ದೊರಕಿಸಿ ಕೊಡುವಲ್ಲಿ ಸರಕಾರದಿಂದ ಪ್ರಯತ್ನವನ್ನು ಮಾಡಿ ಕದ್ರಿ ಸರ್ಕ್ಯೂಟ್ ಹೌಸ್ ಶಾಸಕರ ಕಛೇರಿಯಲ್ಲಿ ದಿ|| ರಾಜೇಶ್ ಅವರ ತಾಯಿಯಾದ ಸುಶೀಲಾ ಇವರಿಗೆ 5 ಲಕ್ಷ ಪರಿಹಾರಧನವನ್ನು ವಿತರಿಸಿದರು.


ಈ ಸಂದರ್ಭದಲ್ಲಿ ಬಿಕರ್ನಕಟ್ಟೆಯ ಕಾರ್ಪೋರೇಟರ್ ಶ್ರೀಮತಿ ಶಕಿಲಾ ಕಾವ, ಮಂಗಳೂರು ದಕ್ಷಿಣ ಮಂಡಲ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ರಘುವೀರ್ ಬಾಬುಗುಡ್ಡ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ದಿ|| ರಾಜೇಶ್ ಅವರ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ಪರಿಹಾರಧನ ಕೊಡಿಸಿರುವುದಕ್ಕೆ ಇವರಿಗೆ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಉಪ ಸಮಾದೇಷ್ಟರಾದ ರಮೇಶ್, ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್‍ಶೇರಾ, ಹಾಗೂ ದಿ|| ರಾಜೇಶ್ ಅವರ ಸಹೋದರಿ ಧನವಂತಿ, ಮತ್ತು ಮಂಗಳೂರು ಘಟಕದ ಸಾರ್ಜೆಂಟ್ ಸುನೀಲ್ ಕುಮಾರ್, ಗೃಹರಕ್ಷಕರಾದ ದಿವಾಕರ್, ಸತೀಶ್ ಕೆ.ಪಿ, ದುಷ್ಯಂತ್ ರೈ  ಮುಂತಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم