ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು

ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು

 


ಹುಬ್ಬಳ್ಳಿ: ಪತ್ನಿಯನ್ನು ಕೊಂದು ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಧಾರವಾಡ ಹೊರವಲಯದ ಗಣೇಶನಗರದ ಗಳವಿ ದಡ್ಡಿಯಲ್ಲಿ ನಡೆದಿದೆ. ಚಟ್ಟು ಗದಗವಾಲೆ ಹಾಗೂ ಮನೀಷಾ ಮೃತ ದುರ್ದೈವಿಗಳು.


ಗೋವಾದಲ್ಲಿ ಕೆಲಸಕ್ಕೆಂದು ಬಂದಿದ್ದ ದಂಪತಿ ಕಳೆದ ನಾಲ್ಕು ದಿನಗಳ ಹಿಂದೆ ಧಾರವಾಡಕ್ಕೆ ವಾಪಸ್​ ಆಗಿದ್ದರು.

ಕಳೆದ ರಾತ್ರಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಪತ್ನಿಯನ್ನು ಭೀಕರವಾಗಿ ಕೊಂದ ಚಟ್ಟು ಗದಗವಾಲೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


0 Comments

Post a Comment

Post a Comment (0)

Previous Post Next Post