ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದೇವಾಲಯಕ್ಕೆ ಬಂದ ಗರ್ಭಿಣಿ ಮಹಿಳೆ ಕುಸಿದು ಬಿದ್ದು ಸಾವು

ದೇವಾಲಯಕ್ಕೆ ಬಂದ ಗರ್ಭಿಣಿ ಮಹಿಳೆ ಕುಸಿದು ಬಿದ್ದು ಸಾವು

 


ಮಳವಳ್ಳಿ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್​ ಎಂಬುವರ ಪತ್ನಿ ಪಂಕಜಾ (26) ಮೃತರು. ಇವರಿಗೆ ಒಂದೂವರೆ ವರ್ಷದ ಗಂಡು ಮಗುವಿದ್ದು, ಎರಡನೇ ಮಗುವಿಗೆ ಎಂಟು ತಿಂಗಳ ಗರ್ಭಿಣಿಯಾಗಿದ್ದರು.

ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಈ ಕಾರಣ ಸಂಬಂಧಿಕರ ಸಲಹೆಯಂತೆ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಪತಿ ಉಮೇಶ್​ ಕುಟುಂಬದವರ ಜೊತೆಗೂಡಿ ಕಾರಿನಲ್ಲಿ ಬಂದಿದ್ದರು.

ಗುರುವಾರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಡುವ ಸಮಯದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

ಕೂಡಲೇ ತಲಕಾಡು ಸರ್ಕಾರಿ ಆಸ್ಪತ್ರೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಈ ಬಗ್ಗೆ ಬೆಳಕವಾಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

hit counter

0 Comments

Post a Comment

Post a Comment (0)

Previous Post Next Post