ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶ್ರೀ ವಿಷ್ಣು ಯುವ ಶಕ್ತಿ ಬಳಗ (ರಿ) ಮಜ್ಜಾರಡ್ಕ ಸಹಯೋಗದಲ್ಲಿ ಜಲ ಸಂವಾದ

ಶ್ರೀ ವಿಷ್ಣು ಯುವ ಶಕ್ತಿ ಬಳಗ (ರಿ) ಮಜ್ಜಾರಡ್ಕ ಸಹಯೋಗದಲ್ಲಿ ಜಲ ಸಂವಾದ

 


ಪುತ್ತೂರು: ಭಾರತ ಸರ್ಕಾರ ಯುವ ಕಾರ್ಯ ಮತ್ತು ಕ್ರೀಡಾಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ,ಕೆಯ್ಯೂರು ಗ್ರಾಮ ಪಂಚಾಯತ್ ಸರಕಾರಿ ಪದವಿಪೂರ್ವ ಕಾಲೇಜು ಕೆಯ್ಯೂರು ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶ್ರೀ ವಿಷ್ಣು ಯುವ ಶಕ್ತಿ ಬಳಗ(ರಿ) ಮಜ್ಜಾರಡ್ಕ ವತಿಯಿಂದ ಜಲ ಸಂವಾದ 2021-22 ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 28 ರಂದು ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೆಯ್ಯೂರು ಇದರ ಪ್ರಾಂಶುಪಾಲರಾದ ಇಸ್ಮಾಯಿಲ್ ಇವರು ಮಾತಾನಾಡಿ ಕಾರ್ಯಕ್ರಮದ ಪ್ರಯೋಜನವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.  


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ ಇದರ ಮೇಲ್ವಿಚಾರಕರಾಗಿರುವ ಶ್ರೀಕಾಂತ್ ಪೂಜಾರಿ ಬಿರಾವು ಮಾತನಾಡಿ ಮಳೆನೀರು ಕೊಯ್ಲು ಇಂದಿನ ಕಾಲಕ್ಕೆ ಬಹಳ ಪ್ರಯೋಜನಕಾರಿಯು ಹೌದು.. ಇಂಗು ಗುಂಡಿ ಮಾಡುವ ಕಾರ್ಯಕ್ರಮ ಪಂಚಾಯತ್ ಕೂಡ ಹಲವಾರು ಸೌಲಭ್ಯ ಒದಗಿಸಿಕೊಡುತ್ತಿದೆ ಅದನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಿ ಎಂದು ಮಾಹಿತಿ ನೀಡಿದರು. 


ಅತಿಥಿಯಾಗಿ ಆಗಮಿಸಿದ ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಭಂಡಾರಿ ಕಾರ್ಯಕ್ರಮಕ್ಕೆ ಹಾಗೂ ಸಂಘಟನೆಗೆ ಶುಭಹಾರೈಸಿದರು. 


ವೇದಿಕೆಯಲ್ಲಿ ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕರಾದ ಗೌತಮ್ ರಾಜ್ ಕರಂಬಾರು ಮತ್ತು ಪ್ರಜ್ಞಾ ಕುಲಾಲ್ ಕಾವು, ಶ್ರೀ ವಿಷ್ಣು ಯುವ ಶಕ್ತಿ ಬಳಗದ ಅಧ್ಯಕ್ಷರಾದ ಉದಯ್ ಸ್ವಾಮಿನಗರ, ಸಂಘಟನಾ‌ ಕಾರ್ಯದರ್ಶಿ ರಾಜೇಶ್ ಕೆ ಮಯೂರ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕವೃಂದ, ಶ್ರೀ ವಿಷ್ಣು ಯುವ ಶಕ್ತಿ ಬಳಗ(ರಿ) ಮಜ್ಜಾರಡ್ಕ ಇದರ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಭಾಗಿಯಾಗಿದ್ದರು.


ಸಾಂಸ್ಕೃತಿಕ ಕಾರ್ಯದರ್ಶಿ ಭವಿತ್ ಮಜ್ಜಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರಜ್ಞಾ ಕುಲಾಲ್ ಕಾವು ಸ್ವಾಗತಿಸಿ, ರಾಜೇಶ್ ಕೆ ಮಯೂರ ವಂದಿಸಿದರು. ದೀಪಕ್ ಕೋಡಿಯಡ್ಕ ಪ್ರಾರ್ಥಿಸಿದರು. ಅತಿಥಿಗಳಿಗೆ ಸ್ಮರಣಿಕೆ ನೀಡಿ‌ ಗೌರವಿಸಲಾಯಿತು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم