ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವ್ಯಕ್ತಿಯ ಮೇಲೆ ಹಲ್ಲೆ ; ನಟ ಜೈ ಜಗದೀಶ್ ಮತ್ತಿತರ ವಿರುದ್ಧ ದೂರು ದಾಖಲು

ವ್ಯಕ್ತಿಯ ಮೇಲೆ ಹಲ್ಲೆ ; ನಟ ಜೈ ಜಗದೀಶ್ ಮತ್ತಿತರ ವಿರುದ್ಧ ದೂರು ದಾಖಲು

 


ಬೆಂಗಳೂರು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ಜೈಜಗದೀಶ್ ಮತ್ತಿತರರ ವಿರುದ್ಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಈ ವಿಚಾರದ ಬಗ್ಗೆ ಪ್ರಕರಣ ದಾಖಲಾಗಿದೆ.


ಜೂನ್ 5ರಂದು ಈ ಘಟನೆ ನಡೆದಿದ್ದು, ಜಯರಾಮೇಗೌಡ ಎಂಬವರು ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು.

ಈ ಸಮಯದಲ್ಲಿ ಅವರು ನಿರ್ವಾಹಕನಿಗೆ ಹೇಳಿ ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ.


ಈ ಸಂದರ್ಭದಲ್ಲಿ ಹಿಂದಿನಿಂದ ಕಾರಿನಲ್ಲಿ ಬಂದ ನಟ ಜೈಜಗದೀಶ್ ಮತ್ತಿತರರು, ಯಾಕೋ ಬಸ್ಸಿನಿಂದ ಬಾಟಲಿ ಎಸೆಯುತ್ತೀಯಾ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವಿಷಯದ ಬಗ್ಗೆ ಇದೀಗ ಪ್ರಕರಣ ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post