ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬದಿಯಡ್ಕ ಗ್ರಾಪಂ ಪಟ್ಟಾಜೆ ವಾರ್ಡು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಪೂರ್ಣಾನುಗ್ರಹವಿತ್ತ ಸಾಯಿರಾಂ ಕೃಷ್ಣಭಟ್

ಬದಿಯಡ್ಕ ಗ್ರಾಪಂ ಪಟ್ಟಾಜೆ ವಾರ್ಡು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಪೂರ್ಣಾನುಗ್ರಹವಿತ್ತ ಸಾಯಿರಾಂ ಕೃಷ್ಣಭಟ್


ಬದಿಯಡ್ಕ: ಕೊಡುಗೈದಾನಿ ಕಿಳಿಂಗಾರು ಸಾಯಿರಾಂ ಕೃಷ್ಣ ಭಟ್ ಅವರು ಬದಿಯಡ್ಕ ಗ್ರಾಮಪಂಚಾಯಿತಿ 14ನೇ ವಾರ್ಡು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಹೇಶ್ ವಳಕ್ಕುಂಜ ಅವರಿಗೆ ಸಂಪೂರ್ಣ ಅನುಗ್ರಹವನ್ನಿತ್ತು ಆಶೀರ್ವದಿಸಿದರು.


ಕೊಡುಗೈ ದಾನಿ ಸಾಯಿರಾಂ ಗೋಪಾಲಕೃಷ್ಣ ಭಟ್ ಅವರ ಸಮಾಜಸೇವೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಅವರು ರಾಜೀನಾಮೆಯನ್ನು ನೀಡಿ ರಾಜಕೀಯದಿಂದ ಮುಕ್ತರಾಗಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಪಟ್ಟಾಜೆ ವಾರ್ಡು ಉಪಚುನಾವಣೆಯು ಜುಲೈ 21ರಂದು ನಡೆಯಲಿದೆ.


ಪಕ್ಷದ ಚುನಾವಣಾ ಸಮಿತಿ ಸಂಚಾಲಕ ವೆಂಕಪ್ಪ ನಾಯ್ಕ ಮಾನ್ಯ, ಬ್ಲಾಕ್ ಪಂಚಾಯಿತಿ ಸದಸ್ಯೆ ಅಶ್ವಿನಿ ಮೊಳೆಯಾರು, ಹಿರಿಯ ಕಾರ್ಯಕರ್ತ ವೆಂಕಟ್ರಮಣ ಚುಕ್ಕಿನಡ್ಕ ಮೊದಲಾದವರು ಜೊತೆಗಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم