ಬದಿಯಡ್ಕ: ಕೇರಳ ರಾಜ್ಯದ ಎಸ್ಎಸ್ಎಲ್ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದ ವಿದ್ಯಾರ್ಥಿನಿ ಶ್ರದ್ಧಾ ಬಳ್ಳಂಬೆಟ್ಟು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್ನೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ.
ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪಿಸಿಎಂಬಿ ಅಧ್ಯಯನಕ್ಕೆ ಸೇರ್ಪಡೆಯಾಗಿದ್ದಾಳೆ.
ಈಕೆ ಬದಿಯಡ್ಕ ಸಮೀಪದ ಕೃಷ್ಣಪ್ರಕಾಶ ಬಳ್ಳಂಬೆಟ್ಟು- ವಸಂತಲಕ್ಷ್ಮಿ ದಂಪತಿಯ ಪುತ್ರಿ.
ಯುಎಸ್ಎಸ್ ಪರೀಕ್ಷೆಯಲ್ಲಿ ಶೇ 92 ಅಂಕಗಳೊಂದಿಗೆ ಉತ್ತೀರ್ಣಳಾಗಿರುವ ಈಕೆ ಹಿಂದಿ ಪರೀಕ್ಷೆಯಲ್ಲಿ ಪ್ರವೀಣ ಪದವಿ ಗಳಿಸಿದ್ದಾಳೆ. ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಸೀನಿಯರ್ ವಿಭಾಗದಲ್ಲಿ ಕಲಿಯುತ್ತಿದ್ದಾಳೆ.
Post a Comment