ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಂಗಳೂರಿನಲ್ಲಿ ಗಣೇಶ ಹಬ್ಬದಂದು ಮಾಂಸ ಮಾರಾಟ ನಿಷೇಧ- ಓವೈಸಿ ಕಿಡಿ

ಬೆಂಗಳೂರಿನಲ್ಲಿ ಗಣೇಶ ಹಬ್ಬದಂದು ಮಾಂಸ ಮಾರಾಟ ನಿಷೇಧ- ಓವೈಸಿ ಕಿಡಿ

 


ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶ ಚತುರ್ಥಿಯ ವೇಳೆ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಇದರ ಜೊತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಈ ನಿರ್ಧಾರವನ್ನು ಖಂಡಿಸಿದ್ದಾರೆ.

ಸೋಮವಾರ ಮಾಧ್ಯಮದ ಜೊತೆಗೆ ಮಾತನಾಡಿ, “ಕರ್ನಾಟಕ ಸರ್ಕಾರದ ಈ ಆದೇಶವು ಭಾರತೀಯ ಸಂವಿಧಾನದ ಉಲ್ಲಂಘನೆಯಾಗಿದೆ. ಯಾರು ಏನು ಧರಿಸುತ್ತಾರೆ ಮತ್ತು ತಿನ್ನುತ್ತಾರೆ ಎಂಬುದು ಅವರ ಸ್ವಂತ ಆಯ್ಕೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿದೆ.

ಕರ್ನಾಟಕದ ಜನಸಂಖ್ಯೆಯ 80% ಜನರು ಮಾಂಸ ತಿನ್ನುತ್ತಾರೆ ಎಂದು ಹೇಳಿದರು.


ಒಂದೆಡೆ ದೊಡ್ಡ ರೆಸ್ಟೋರೆಂಟ್‌ಗಳು ಮಾಂಸಾಹಾರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತವೆ. ಆದರೆ ಪ್ರಾಮಾಣಿಕ ಜೀವನವನ್ನು ನಡೆಸಲು ಪ್ರಯತ್ನಿಸುವ ಸಣ್ಣ ಪುಟ್ಟ ವ್ಯಾಪಾರಿಗಳು ತೊಂದರೆಗೊಳಗಾಗುತ್ತಾರೆ, ಇದು ಅತ್ಯಂತ ತಪ್ಪು ನಿರ್ಧಾರವಾಗಿದೆ ಎಂದು ಒವೈಸಿ ಟೀಕಿಸಿದ್ದಾರೆ.

0 Comments

Post a Comment

Post a Comment (0)

Previous Post Next Post