ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಣೇಶ ಚತುರ್ಥಿ: ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿ ವಿತರಣೆ

ಗಣೇಶ ಚತುರ್ಥಿ: ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿ ವಿತರಣೆ


ಬೆಂಗಳೂರು: ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹೀ ಗೌರಿ ಗಣೇಶ ಮೂರ್ತಿಗಳನ್ನು ವಿತರಣೆಯನ್ನು ಆಯೋಜಿಸಲಾಗಿದೆ. ಅಲ್ಲದೇ ಮೂರು ಬಗೆಯ ಹಣ್ಣುಗಳಿಂದ ದೇವಸ್ಥಾನದಲ್ಲಿ ವಿಶೇಷ ಆಲಂಕಾರವನ್ನು ಮಾಡಲಾಗುವುದು ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌ನ ಟ್ರಸ್ಟಿಗಳಾದ ರಾಮ್‌ ಮೋಹನ ರಾಜ್‌ ತಿಳಿಸಿದರು. 


ಪ್ರತಿವರ್ಷ ಹೊಸದೊಂದು ಥೀಮ್‌ ನಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವ ಹಾಗೂ ವಿಶೇಷ ಆಲಂಕಾರವನ್ನು ಮಾಡುವ ಮೂಲಕ ದೇಶದ ಗಮನವನ್ನು ಸೆಳೆಯುತ್ತಿದ್ದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ ಈ ಬಾರಿ 10 ಸಾವಿರ ಪರಿಸರ ಸ್ನೇಹೀ ಗೌರಿ ಗಣೇಶ ಮೂರ್ತಿಗಳನ್ನು ವಿತರಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಜನರಿಗೆ ಪರಿಸರ ಸ್ನೇಹೀ ಗಣೇಶ ಹಾಗೂ ಗೌರಿಯ ಮೂರ್ತಿಯನ್ನು ಪ್ರಸಾದದ ರೂಪದಲ್ಲಿ ನೀಡುವ ಮೂಲಕ ಅವರ ಮನೆ ಹಾಗೂ ಮನಗಳಲ್ಲಿ ಪರಿಸರ ಸ್ನೇಹೀ ಹಬ್ಬದ ವಾತಾವರಣ ತುಂಬುವುದು ನಮ್ಮ ಪ್ರಮುಖ ಉದ್ದೇಶವಾಗಿದೆ.


ಶಾಸಕ ಸತೀಶ್ ರೆಡ್ಡಿ, ಸಂಸದ ತೇಜಸ್ವಿ ಸೂರ್ಯ ಅವರು ಭಕ್ತರಿಗೆ ಪ್ರಸಾದದ ರೂಪದಲ್ಲಿ ಗೌರಿ-ಗಣೇಶನ ಮೂರ್ತಿಯನ್ನು ಉಚಿತವಾಗಿ ವಿತರಣೆ ಮಾಡಲಿದ್ದಾರೆ. ವಿತರಣೆಯ ಜೊತೆಯಲ್ಲಿಯೇ, ಗರ್ಭಗುಡಿಯ ಒಳಗೆ ಮೂರು ಬಗೆಯ ಹಣ್ಣುಗಳಿಂದ ದೇವರನ್ನು ಅಲಂಕಾರ ಮಾಡಲಿದ್ದು ಭಕ್ತರು ಇದನ್ನು ಕಣ್ತುಂಬಿಕೊಳ್ಳಬಹುದು” ಎಂದು ಹೇಳಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 Comments

Post a Comment

Post a Comment (0)

Previous Post Next Post