ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನ ಆವರಣದಲ್ಲಿ ವನಮಹೋತ್ಸವ ಆಚರಣೆ

ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನ ಆವರಣದಲ್ಲಿ ವನಮಹೋತ್ಸವ ಆಚರಣೆ


ಮಂಗಳೂರು: ಭಾನುವಾರದಂದು (ಜು.31) ಬೆಳಿಗ್ಗೆ 8:00 ಗಂಟೆಗೆ ಪಣಂಬೂರು ಘಟಕದ ವತಿಯಿಂದ ಶ್ರೀ ನಂದನೇಶ್ವರ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.


ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಸುಮಾರು 1000 ಸಸಿಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಗಿಡ ನೆಟ್ಟು ಹಸಿರು ಬೆಳೆಸಿದಲ್ಲಿ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಸಿಗಳನ್ನು ನೆಡುವ ಕಾರ್ಯ ಯೋಜನೆ ಸಿದ್ಧಪಡಿಸಲಾಗಿದೆ ಎಂದು ನುಡಿದರು.


ದೇವಸ್ಥಾನದ ಆವರಣದಲ್ಲಿ ಬಿಲ್ವ ಪತ್ರೆ ಗಿಡಗಳನ್ನು ನೆಡಲಾಯಿತು ಹಾಗೂ ಗೃಹರಕ್ಷಕರಿಗೆ ಮಾವು, ನೇರಳೆ, ಪೇರಳೆ, ಹಲಸು, ಹೆಬ್ಬಲಸು ಮುಂತಾದ ಗಿಡಗಳನ್ನು ಹಂಚಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ದೇವವ್ರತ ಶರ್ಮ, ಪರಮೇಶ್ವರ ಭಟ್, ಸಮಿತಿ ಅಧ್ಯಕ್ಷರಾದ ಅನಂತ ಐತಾಳ್, ಪಣಂಬೂರು ಘಟಕದ ನಿವೃತ್ತ ಘಟಕಾಧಿಕಾರಿಯಾದ ಹರೀಶ್ ಆಚಾರ್, ಪ್ರಭಾರ ಘಟಕಾಧಿಕಾರಿ ಶಿವಪ್ಪ ನಾಯ್ಕ್ ಮತ್ತು ಪಣಂಬೂರು ಘಟಕದ ಗೃಹರಕ್ಷಕರಾದ ಗಂಗಾಧರ್ ಎಸ್. ಕೆ, ಜಗದೀಶ್, ರಾಘವೇಂದ್ರ, ಪ್ರೇಮ, ದಿನೇಶ್ ಮುಂತಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


0 Comments

Post a Comment

Post a Comment (0)

Previous Post Next Post