ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದೆಹಲಿಗೆ ಹೋಗಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಪ್ರಯಾಣಿಕರನ್ನು ಬಿಟ್ಟು ಹೋದ ಆರೋಪ

ದೆಹಲಿಗೆ ಹೋಗಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಪ್ರಯಾಣಿಕರನ್ನು ಬಿಟ್ಟು ಹೋದ ಆರೋಪ

 


ಬೆಂಗಳೂರು: ದೆಹಲಿಗೆ ಹೋಗಬೇಕಿದ್ದ ವಿಮಾನವೊಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಅಲ್ಲೇ ಬಿಟ್ಟು ಹೊರಟಿರುವ ಘಟನೆ ವರದಿಯಾಗಿದೆ.


ಈ ಬಗ್ಗೆ @GoFirstairways ವಿಮಾನಯಾನ ಸಂಸ್ಥೆಯನ್ನು ಟ್ಯಾಗ್ ಮಾಡಿರುವ ಟ್ವಿಟರಿಗರು, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ, ಬೆಂಗಳೂರಿನಿಂದ ದೆಹಲಿಗೆ ಜಿ8 116 ವಿಮಾನವು ಬೆಳಿಗ್ಗೆ 6.30 ರ ಸುಮಾರಿಗೆ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ಹೊರಟಿತು ಎಂದು ಆರೋಪಿಸಿದ್ದಾರೆ.


ವಿಮಾನಯಾನ ಸಂಸ್ಥೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ, ಇದೊಂದು ಭಯಾನಕ ಅನುಭವ'' ಎಂದು ಶ್ರೇಯಾ ಸಿನ್ಹಾ ಎಂಬ ಪ್ರಯಾಣಿಕರೊಬ್ಬರು ಟ್ವಿಟರ್ ನಲ್ಲಿ ಬರೆದು ಕೊಂಡಿದ್ದಾರೆ.




0 Comments

Post a Comment

Post a Comment (0)

Previous Post Next Post