ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಿಕ್ಷಕ, ಸಾಹಿತಿ ಅಂಬಾತನಯ ಮುದ್ರಾಡಿ ನಿಧನ

ಶಿಕ್ಷಕ, ಸಾಹಿತಿ ಅಂಬಾತನಯ ಮುದ್ರಾಡಿ ನಿಧನ




ಕಾರ್ಕಳ: ಸಾತ್ವಿಕ ಮನೋಭಾವದ ಸಹೃದಯಿ ಅಂಬಾತನಯ ಮುದ್ರಾಡಿ (88) ಅವರು ಇಂದು (ಫೆ.21, ಮಂಗಳವಾರ) ಮುಂಜಾನೆ ನಿಧನರಾದರು. ಶಿಕ್ಷಕ, ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ, ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿ ಸಾರ್ಥಕವಾಗಿ ಬದುಕನ್ನು ಪೂರೈಸಿದವರು ಅಂಬಾತನಯ ಮುದ್ರಾಡಿ.


ಕಳೆದ ವಾರ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡದ್ದು ಅವರ ಕೊನೆಯ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ 'ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ' ಪುಸ್ತಕವನ್ನು ಪ್ರಕಟಿಸಲಾಗಿತ್ತು. ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅವರಿಗೆ ಅರ್ಹವಾಗಿ ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ. ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗವು ಅವರನ್ನು ಗೌರವಿಸಿದೆ. ಸಂಸ್ಥೆಗೆ ಸದಾ ಮಾರ್ಗದರ್ಶನ ನೀಡುತ್ತಾ ಬಂದ ಅಂಬಾತನಯರ ಅಗಲುವಿಕೆಗೆ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم