ಮಂಗಳೂರು: ಅರುಣ್ಯ ಫೌಂಡೇಶನ್ ಮತ್ತು ದಾಸ್ ಕುಡ್ಲ ಇವೆಂಟ್ಸ್ ಮಂಗಳೂರು ಸಾರಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ಇತ್ತೀಚೆಗೆ ನಡೆದ `ಕರಾವಳಿ ಕೋಯಲ್ ಚಾಂಪಿಯನ್ಸ್ SPL 2023' ಸಂಗೀತ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರುರವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ವಿಶೇಷ ಸಾಧಕಿ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದಾಸ್ ಕುಡ್ಲ ಇವೆಂಟ್ಸ್ನ ಸದಾಶಿವದಾಸ್ ಪಾಂಡೇಶ್ವರ ಅರುಣ್ಯ ಫೌಂಡೇಶನ್ನ ಮ್ಯಾನೇಜಿಂಗ್ ಟ್ರಸ್ಟಿ ವಿಕ್ರಮ್ ಕೆ. ಸಂಗೀತ ಕ್ಷೇತ್ರದ ಸಾಧಕಿ ಶಾರದಾ ಬಾರ್ಕೂರು, ಅರುಣ್ಯ ಫೌಂಡೇಶನ್ ಕಾರ್ಯದರ್ಶಿ ಶ್ರೀನಿವಾಸ ಪೆಜತ್ತಾಯ ಉಪಸ್ಥಿತರಿದ್ದರು. ಆರ್.ಜೆ. ಪ್ರಸನ್ನ ಹಾಗೂ ಅಭಿಷೇಕ್ರವರು ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment