ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ನಿಧನ

ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ನಿಧನ



ಉಡುಪಿ: ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟರು  (72 ವರ್ಷ) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸೋಮವಾರ (ಜುಲೈ 8) ರಾತ್ರಿ ತಾವು ವಾಸ್ತವ್ಯವಿದ್ದ ಉಡುಪಿ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ ಓರ್ವ ಪುತ್ರ, ಸಹೋದರರು, ಸಹೋದರಿಯರು ಹಾಗೂ ಅನೇಕ ಶಿಷ್ಯರನ್ನು ಅಗಲಿದ್ದಾರೆ.


ಜ್ಯೋತಿಷ, ವೇದ ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ಭಟ್ಟರು ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪಂಚಮ ಪರ್ಯಾಯದ ಅವಧಿಯಲ್ಲಿ ಶ್ರೀ ಕೃಷ್ಣ ಮಠದ ಸಹದಿವಾನರಾಗಿಯೂ ಸೇವೆ ಸಲ್ಲಿಸಿದ್ದರು. ಆ ಅವಧಿಯಲ್ಲೇ  ಋಗ್ವೇದದ ಪವಮಾನ ಸೂಕ್ತಗಳಿಗೆ ಕನ್ನಡ ವ್ಯಾಖ್ಯಾನ ಬರೆದು ಶ್ರೀ ವಿಶ್ವೇಶತೀರ್ಥರ ಮೂಲಕ ಲೋಕಾರ್ಪಣೆಗೊಳಿಸಿದ್ದರು.


ಭಟ್ಟರ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಶ್ರೀಗಳು ಈ ಕೃತಿಯ ಪ್ರಕಾಶನ ಮತ್ತು ಬಿಡುಗಡೆ ತಮ್ಮ ಪಂಚಮ ಪರ್ಯಾಯದ ಉತ್ತಮ ಕಾರ್ಯಗಳಲ್ಲಿ ಒಂದು ಎಂದು ಶ್ಲಾಘಿಸಿದ್ದರು. ಅದರ ಜೊತೆ ಇನ್ನೂ ಕೆಲವು ಕೃತಿಗಳನ್ನೂ ಅವರು ರಚಿಸಿ ಸಾಹಿತ್ಯ ಕೈಂಕರ್ಯ ನಡೆಸಿದ್ದರು. ನೂರಾರು ಶಿಷ್ಯಂದಿರಿಗೆ ವೇದ ಉಪನಿಷತ್ತುಗಳ ಪಾಠವನ್ನು ನಿನ್ನೆಯ ವರೆಗೂ ನಡೆಸಿದ್ದುದು ವಿಶೇಷ. 

ಅವರ ಅಪೇಕ್ಷೆಯಂತೆ ಪಾರ್ಥಿವ ಶರೀರವನ್ನು ಮಣಿಪಾಲದ ಕೆಎಂ‌ಸಿ ಕಾಲೇಜಿನ‌ ವಿದ್ಯಾರ್ಥಿಗಳ ಅಧ್ಯಯನಾರ್ಥ ಹಸ್ತಾಂತರಿಸಲಾಯಿತು.


ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ರಾಮಚಂದ್ರ ಭಟ್ಟರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿ, ಅವರಿಗೆ ಸದ್ಗತಿಯನ್ನು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


0 تعليقات

إرسال تعليق

Post a Comment (0)

أحدث أقدم